Posts

Showing posts from June, 2019

ನಗರ ಪ್ರದೇಶದ ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಅಗತ್ಯ ಕ್ರಮ : ಕೆ.ಎಸ್.ಈಶ್ವರಪ್ಪ

Image
ಶಿವಮೊಗ್ಗ : ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಗೊಳಪಡುವ ಅಂಗನವಾಡಿಯಿಂದ ಪ್ರೌಢಶಾಲೆಯವರೆಗಿನ ಎಲ್ಲಾ ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಸರ್ಕಾರದ ಯೋಜನೆಗಳು, ಮಹಾನಗರಪಾಲಿಕೆ, ದಾನಿಗಳು ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು. ಅವರು ಇಂದು ಜಿಲ್ಲಾಡಳಿತ ಭವನದಲ್ಲಿ ನಗರ ವ್ಯಾಪ್ತಿಯ ಎಲ್ಲಾ ಸರ್ಕಾರಿ ಶಾಲೆಗಳ ಮುಖ್ಯೋಪಾಧ್ಯರು ಹಾಗೂ ಮೇಲುಸ್ತವಾರಿ ಸಮಿತಿ ಅಧ್ಯಕ್ಷರ ಉಪಸ್ಥಿತಿಯಲ್ಲಿ ಸರ್ಕಾರಿ ಶಾಲೆಗಳ ಸರ್ವಾಂಗೀಣ ವಿಕಾಸಕ್ಕಾಗಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಏರ್ಪಡಿಸಿದ್ದ ಚಿಂತನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕಳೆದ ದಶಕಗಳಿಂದೀಚೆಗೆ ಸರ್ಕಾರಿ ಶಾಲೆಗಳ ಅಭಿವೃಧ್ಧಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ನಿರೀಕ್ಷಿತ ಅನುದಾನ ಲಬ್ಯವಾಗುತ್ತಿಲ್ಲ. ಅಲ್ಲದೇ ಶಾಲೆಗಳ ಮಕ್ಕಳ ಸಂಖ್ಯೆಗನುಗುಣವಾಗಿ ಕಟ್ಟಡಗಳು, ಪೀಠೋಪಕರಣಗಳು, ಕುಡಿಯುವ ನೀರಿನ ಪೂರೈಕೆ ಇತ್ಯಾದಿ ಸಮಸ್ಯೆಗಳ ಕುರಿತು ಗಂಭೀರ ಸ್ವರೂಪದ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಕಟ್ಟಡಗಳ ದುರಸ್ತಿ, ನವೀಕರಣ, ಕುಡಿಯುವ ನೀರು, ಶೌಚಾಲಯ ಮುಂತಾದವುಗಳನ್ನು ಕೊಡುಗೈ ದಾನಿಗಳಿಂದ ದಾನ ಪಡೆದು, ಅದರಿಂದ ಬರುವ ಅನುದಾನದಿಂದ ಆದ್ಯತೆಯನುಸಾರ ಶಾಲೆಗಳ ವಿಕಾಸಕ್ಕೆ ಕ್ರಮ ಕೈಗೊಳ್ಳಲು ಉದ್ದೇಶಿಸಲಾಗಿದೆ ಎಂದ ಅವರು, ಅ...

ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ವಸತಿನಿಲಯ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

Image
ಶಿವಮೊಗ್ಗ : ಮೆಟ್ರಿಕ್ ನಂತರದ ಬಾಲಕ ಬಾಲಕೀಯರ ಸಾಮಾನ್ಯ, ಮಾದರಿ, ವೃತ್ತಿಪರ, ಸ್ನಾತಕೋತ್ತರ, ನರ್ಸಿಂಗ್, ಇಂಜಿನಿಯರಿಂಗ್ & ವೈದ್ಯಕೀಯ ವಿದ್ಯಾರ್ಥಿನಿಲಯಗಳ ಉಳಿಕೆ ಸ್ಥಾನಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.  ಪ್ರವರ್ಗ 1, 2ಎ, 2ಬಿ, 3ಎ, 3ಬಿ ಹಾಗೂ ಇತರೆ ಹಿಂದುಳಿದ ವರ್ಗ ಮತ್ತು ಎಸ್.ಸಿ/ ಎಸ್.ಟಿ ವಿದ್ಯಾರ್ಥಿಗಳು ಇಲಾಖೆ ವೆಬ್‌ಸೈಟ್  www.backwardclasses.kar.nic.in   ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವಾಗ ತಾಂತ್ರಿಕ ತೊಂದರೆಗಳಾದಲ್ಲಿ  bcwd.hostels@karnataka.gov.in  ಇ ಮೇಲ್ ಮೂಲಕ ಅಥವಾ ತಾಲ್ಲೂಕು/ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು. ಪ್ರವರ್ಗ-1, ಎಸ್‌ಟಿ ಎಸ್‌ಸಿ ವಿದ್ಯಾರ್ಥಿಗಳ ಪಾಲಕರ ಆದಾಯ ಮಿತಿ 2.50 ಲಕ್ಷ ಹಾಗೂ ಇತರೆ ವರ್ಗಗಳ ಆದಾಯ ಮಿತಿ 1.00 ಲಕ್ಷಕ್ಕೆ ಸೀಮಿತವಿರಬೇಕು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 12 ಆಗಿರುತ್ತದೆ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 080-65970006ಕ್ಕೆ ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಸ್ಥಳೀಯ ಪತ್ರಿಕೆಗಳು ನಾಗರೀಕ ನಂಬಿಕೆಗಳನ್ನು ಗಟ್ಟಿಗೊಳಿಸುತ್ತಲೇ ಇದೆ : ಪತ್ರಕರ್ತ ಗಾರಾ.ಶ್ರೀನಿವಾಸ್

Image
ಶಿವಮೊಗ್ಗ : ಮಾಧ್ಯಮಗಳ ವಿಶ್ಲೇಷಣೆಗಳನ್ನಾಗಲಿ ಅಥವಾ ಮೌಲ್ಯಧಾರಿತ ಪತ್ರಿಕೋದ್ಯಮದ ಬಗ್ಗೆ ವಿಮರ್ಶಿಸಿ ಸಭಿಕರಿಂದ ಚಪ್ಪಾಳೆ ತಟ್ಟಿಸಿಕೊಳ್ಳುವ ಭಾಷಣವನ್ನು ಮಾಡದೇ ಸುಧೀರ್ಘ ಹದಿನೈದು ವರ್ಷಗಳಲ್ಲಿನ ಪತ್ರಿಕಾ ಅನುಭವ ಹಾಗೂ ಅಧ್ಯಯನಗಳನ್ನು ಇಲ್ಲಿ ದಾಖಲಿಸುತ್ತಿದ್ದೇನೆ ಎಂದು ಪತ್ರಕರ್ತರಾದ ಗಾರಾ.ಶ್ರೀನಿವಾಸ್ ಹೇಳಿದರು. ಲಾಲ್ ಬಹಾದ್ದೂರ್ ಶಾಸ್ತ್ರಿ ಬಡಾವಣೆಯಲ್ಲಿರುವ ರೋಟರಿ ಭವನದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಕ್ಷೇತ್ರದಲ್ಲಿ ಮಾಧ್ಯಮದ ಪಾತ್ರ ಎನ್ನುವ ವಿಷಯ ಕುರಿತಾದ ವಿಚಾರ ಸಂಕೀರಣಕ್ಕೆ ವಾರದ ಅತಿಥಿಯಾಗಿ ಆಗಮಿಸಿ ಮಾತನಾಡುತ್ತಿದ್ದರು. ಮಾಧ್ಯಮ ಅಂದ ಕೂಡಲೇ ಅಂದು ಏಕತೆ ಇತ್ತು, ಮೌಲ್ಯವುಳ್ಳ ದನಿ ಇತ್ತು, ಸಂಘಟಿತವಾದ ಹೆಜ್ಜೆಗಳಿಂದ ಸಾರ್ವಜನಿಕ ವಲಯದಲ್ಲಿ ಭರವಸೆ ಮೂಡಿಸಿತ್ತು, ಯಾವುದೇ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸುವ ಕಾಳಜಿ ಇತ್ತು, ಪ್ರಸ್ತುತ ದಿನಮಾನದಲ್ಲಿ ಎಲ್ಲವೂ ಶೂನ್ಯವಾಗಿದೆ, ಯಾವುದು ಇತ್ತು ಎಂದು ಆತ್ಮವಿಶ್ವಾಸದಿಂದ ಹೇಳುತ್ತಿದ್ದೇವೋ..? ಅವೆಲ್ಲವೂ ಇಂದು ಇಲ್ಲವಾಗಿದೆ, ಎಲ್ಲಿದೆ ಮೌಲ್ಯ, ಎಲ್ಲಿದೆ ಸಾರ್ವಜನಿಕ ವಲಯದಲ್ಲಿ ಮೂಡಿಸಿದ ಭರವಸೆ ಎನ್ನುವ ಸಂಗತಿಗಳನ್ನು ಹುಡುಕುವ ದುರಂತಗಳು ಮಾದ್ಯಮದ ಮುಂದೆ ಎದುರಾಗಿ ಅಣುಕಿಸುತ್ತಿದ್ದರು ನಾವು ಪತ್ರಕರ್ತರು ಎನ್ನುವ ಬಿಗುಮಾನಗಳಿಗೇನು ಕೊರತೆ ಇಲ್ಲವಾಗಿದೆ ಎಂದು ಗಾರಾ.ಶ್ರೀನಿವಾಸ್ ಹೇಳಿದರು. ಪತ್ರಿಕಾ ಅಭಿವ್ಯಕ್ತಿ ಎನ್ನುವುದು ಅ...